ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ; ಅವರೇನು ಪಿಎಚ್ ಡಿ ಮಾಡಿದ್ದಾರಾ?

ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ
ಚಕ್ರವರ್ತಿ ಸೂಲಿಬೆಲೆ
ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು: ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
 
ಬಿಜೆಪಿ  ಅವಧಿಯ ಪಠ್ಯ ಪರಿಷ್ಕರಣೆ  ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರು ಇವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ.

ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಕಿಡಿಕಾರಿದರು.  ಚಕ್ರವರ್ತಿ ಸೂಲಿಬೆಲೆಯವರು ಭಗತ್‌ಸಿಂಗ್, ಸುಖದೇವ್ ಅವರ ಬಗ್ಗೆ ಬರೆದಿರುವುದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವವಿದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ನಾನು ನಾಸ್ತಿಕ ಏಕೆ ಆಗಿದ್ದೇನೆ ಎಂಬ ಭಗತ್ ಸಿಂಗ್ ಪುಸ್ತಕವಿದೆ. ಅದನ್ನು ಚಕ್ರವರ್ತಿ ಸೂಲಿಬೆಲೆ ಓದಲಿ ಸಾಕು. ಇತಿಹಾಸ ತಿರುಚಿಲ್ಲದ ಪಾಠ ನಾವು ಇಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ಸಾಹಿತಿಗಳ ಹಿನ್ನೆಲೆ ಇಲ್ಲದೇ ಬರೆದವರ ಪಠ್ಯ ಯಾಕೆ ಓದಬೇಕು? ಆಡಳಿತ ಪಕ್ಷಕ್ಕೆ ಹತ್ತಿರದವರಾಗಿದ್ದೆ ಎಂದು ಪಠ್ಯ ಹಾಕುವುದು ಸರಿನಾ? ನಾವು ಅದರ ವಿರುದ್ಧ ಇದ್ದೇವೆ. ನಮ್ಮ ಮಕ್ಕಳು ವಾಟ್ಸಪ್ ಯೂನಿವರ್ಸಿಟಿ ಓದಬೇಕಾ ಅಥವಾ ಒಳ್ಳೆಯ ಯೂನಿವರ್ಸಿಟಿ ಓದಬೇಕಾ ಎಂದು

ಚಕ್ರವರ್ತಿಗಿಂತ ಒಳ್ಳೆಯ ಸಾಹಿತಿಗಳು ನಮ್ಮಲ್ಲಿ ಇಲ್ಲವಾ? ಚಕ್ರವರ್ತಿ ಸೂಲಿಬೆಲೆ ವಾಸ್ತವ ಹೇಳುವ ವ್ಯಕ್ತಿ ಅಲ್ಲ. ಅವರು ಬರೆದಿರುವ ಪಠ್ಯ ನಾನು ಯಾಕೆ ಓದಲಿ? ನನಗೆ ಓದೋಕೆ ಸಾಕಷ್ಟಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com