‘ಶಕ್ತಿ’ ಯೋಜನೆ: ರಾಜ್ಯದ ಗಡಿಯಿಂದ 20 ಕಿ.ಮೀ. ಒಳಗಿನ ವ್ಯಾಪ್ತಿವರೆಗೂ ಉಚಿತ ಪ್ರಯಾಣ- ಸಿದ್ದರಾಮಯ್ಯ

ಶಕ್ತಿ’ ಯೋಜನೆ ಅಡಿ ರಾಜ್ಯದ ಗಡಿಯಿಂದ 20 ಕಿ.ಮೀ. ಒಳಗಿನವರೆಗೂ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ‘ಶಕ್ತಿ’ ಯೋಜನೆ ಅಡಿ ರಾಜ್ಯದ ಗಡಿಯಿಂದ 20 ಕಿ.ಮೀ. ಒಳಗಿನ ವ್ಯಾಪ್ತಿವರೆಗೂ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭಾನುವಾರ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡುವುದಾಗಿ ಸಿಎಂ ತಿಳಿಸಿದ್ದಾರೆ.

"ನಾವು 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ವಿಧಾನಸೌಧದಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡುತ್ತೇವೆ. ಎಸಿ ಮತ್ತು ವೋಲ್ವೋ ಬಸ್ ಹೊರತುಪಡಿಸಿ ಉಳಿದ ಎಲ್ಲಾ(ಸರ್ಕಾರಿ ಸ್ವಾಮ್ಯದ) ಬಸ್‌ಗಳಲ್ಲಿ ಉಚಿತವಾಗಿ ರಾಜ್ಯದೊಳಗೆ ಪ್ರಯಾಣಿಸಲು ಅರ್ಹರಾಗಿರುತ್ತಾರೆ" ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಮಹಿಳೆಯರು ಅಂತರರಾಜ್ಯ ಬಸ್‌ನಲ್ಲಿ ಪ್ರಯಾಣಿಸಲು ಬಯಸಿದರೆ ಅವರು ಟಿಕೆಟ್ ಪಡೆಯಬೇಕು. ಮಹಿಳೆ ತಿರುಪತಿಗೆ ಹೋಗಲು ಬಯಸಿದರೆ, ಅವರು ಉಚಿತವಾಗಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದರು.

ಉದಾಹರಣೆಗೆ, ಬಳ್ಳಾರಿಯಿಂದ ಆಂಧ್ರಪ್ರದೇಶದ ಒಳಗೆ 20 ಕಿ.ಮೀ.ವರೆಗೆ ಅವರು(ಮಹಿಳೆಯರು) ಉಚಿತವಾಗಿ ಹೋಗಬಹುದು ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com