ನುಡಿದಂತೆ ನಡೆಯುವವರು ನಾವು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ: ದಿನೇಶ್ ಗುಂಡೂರಾವ್

ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದ್ದಾರೆ.
ದಿನೇಶ್ ಗುಂಡೂರಾವ್.
ದಿನೇಶ್ ಗುಂಡೂರಾವ್.
Updated on

ಬೆಂಗಳೂರು: ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಇಂದಿನಿಂದ ಅನುಷ್ಟಾನವಾಗಲಿದೆ. ನಾವು ಅಧಿಕಾರಕ್ಕೆ ಬಂದ 1ತಿಂಗಳ ಒಳಗೇ ಈ ಯೋಜನೆ ಅನುಷ್ಟಾನವಾಗುತ್ತಿರುವುದು‌ ಸಾರ್ಥಕತೆ ಮೂಡಿಸಿದೆಯ ನಾನು ಉಸ್ತುವಾರಿಯಾಗಿರುವ ದಕ್ಷಿಣ ಕನ್ನಡದ ಬಿಜೈನ ಕೆಎಸ್ಆರ್'ಟಿಸಿ ನಿಗಮದಲ್ಲಿ ನಾನು ಈ ಯೋಜನೆಗೆ ಇಂದು ಚಾಲನೆ ನೀಡಲಿದ್ದೇನೆಂದು ಹೇಳಿದ್ದಾರೆ.

ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಬಗ್ಗೆ BJPಯವರು ಹಾಗೂ ಕೆಲ ಪಟ್ಟಭಧ್ರ ಹಿತಾಸಕ್ತಿಗಳು‌ ಅಪಪ್ರಚಾರ ನಡೆಸಿದ್ದರು. ಈ ಯೋಜನೆಗಳು ಅನುಷ್ಟಾನವಾಗುವುದೇ ಇಲ್ಲ ಎಂದು ಜನರಲ್ಲಿ ಗೊಂದಲ ಮೂಡಿಸಿದ್ದರು. ಆದರೆ, ನಾವು ನುಡಿದಂತೆ ನಡೆಯುವವರು ಎಂಬುದಕ್ಕೆ ಇಂದಿನಿಂದ ಅನುಷ್ಟಾನವಾಗುತ್ತಿರುವ 'ಶಕ್ತಿ' ಯೋಜನೆಯೇ ಸಾಕ್ಷಿ.

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆ ಅನುಷ್ಟಾನವಾಗುತ್ತಿರುವುದು ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಪ್ರತೀಕ. ಇದೇ ರೀತಿ 'ಅನ್ನಭಾಗ್ಯ','ಗೃಹಲಕ್ಷ್ಮಿ', 'ಗೃಹಜ್ಯೋತಿ' ಮತ್ತು 'ಯುವನಿಧಿ' ಯೋಜನೆಗಳು ಕೂಡ ಜಾರಿಯಾಗಲಿವೆ. ಈ ಬಗ್ಗೆ ರಾಜಕೀಯ ವಿರೋಧಿಗಳು ಎಷ್ಟೇ ಅಪಪ್ರಚಾರ ಮಾಡಲಿ, ಈ ಯೋಜನೆಗಳು ಜನರಿಗೆ ತಲುಪುವುದು ಖಚಿತ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com