ಮೈಸೂರಿನಲ್ಲಿ ಸಿಕ್ಕಿಬಿದ್ದ ಮೊಬೈಲ್ ಕಳ್ಳನಿಗೆ ಥಳಿತ

ವ್ಯಕ್ತಿಯೊಬ್ಬನಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮನ ಹಿಡಿದ ಸಾರ್ವಜನಿಕರು ಆತನಿಗೆ ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ವ್ಯಕ್ತಿಯೊಬ್ಬನಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮನ ಹಿಡಿದ ಸಾರ್ವಜನಿಕರು ಆತನಿಗೆ ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಬಳಿ ನಡೆದಿದೆ.

ಕುವೆಂಪುನಗರದ ನಿವಾಸಿ ಶಿವಣ್ಣ ಎಂಬುವರು ಹಾರ್ಡಿಂಜ್ ವೃತ್ತದಿಂದ ಚಾಮರಾಜ ವೃತ್ತದ ಕಡೆಗೆ ಫೋನ್ ನಲ್ಲಿ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದಿರುವ ಇಬ್ಬರು ಆರೋಪಿಗಳು, ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಇಬ್ಬರ ಪೈಕಿ ಓರ್ವ ಆರೋಪಿಯನ್ನು ಹಿಡಿಯುವಲ್ಲಿ ಶಿವಣ್ಣ ಅವರು ಯಶಸ್ವಿಯಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರರು ಶಿವಣ್ಣ ಅವರಿಗೆ ಸಾಥ್ ನೀಡಿದ್ದು, ಮತ್ತೊರ್ವ ಆರೋಪಿಯನ್ನೂ ಹಿಡಿದು ಥಳಿಸಿದ್ದಾರೆ. ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com