ಉಡುಪಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರಿಗೆ ಗಾಯ

ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದು, ಮತ್ತೋರ್ವ ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಸುಬ್ಬಣ್ಣ ಗಾಣಿಗ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದು, ಮತ್ತೋರ್ವ ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. 

ಮೃತರನ್ನು ಸುಬ್ಬಣ್ಣ ಗಾಣಿಗ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆಗೆ ತೆರಳುತ್ತಿದ್ದ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಉಡುಪಿಗೆ ವಾಪಸಾಗುತ್ತಿದ್ದ ಶಿಕ್ಷಕರು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಮತ್ತೊಬ್ಬ ಶಿಕ್ಷಕ ಸುದರ್ಶನ್ ಅವರಿಗೆ ತೀವ್ರ ಗಾಯಗಳಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com