ಗಣಿಗಾರಿಕೆಗೆ ಮೀಸಲು ಅರಣ್ಯ ಭೂಮಿ ಮಂಜೂರು: ಹಾಸನ ಡಿಸಿಎಫ್ ಅಮಾನತು

ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ದಾಡಿಘಟ್ಟ ಗ್ರಾಮದ ಮೀಸಲು ಅರಣ್ಯ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಗಣಿಗಾರಿಕೆ ನಡೆಸಲು ನಿರಾಕ್ಷೇಪಣಾ ಪತ್ರ ನೀಡಿದ ಆರೋಪದ ಮೇಲೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕೆ.ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹಾಸನ: ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಹೋಬಳಿಯ ದಾಡಿಘಟ್ಟ ಗ್ರಾಮದ ಮೀಸಲು ಅರಣ್ಯ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘಿಸಿ ಗಣಿಗಾರಿಕೆ ನಡೆಸಲು ನಿರಾಕ್ಷೇಪಣಾ ಪತ್ರ ನೀಡಿದ ಆರೋಪದ ಮೇಲೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಕೆ.ಹರೀಶ್ ಅವರನ್ನು ಅಮಾನತುಗೊಳಿಸಲಾಗಿದೆ.

ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರ ನಿರ್ದೇಶನದ ಮೇರೆಗೆ ಸೇವಾ, ಅರಣ್ಯ ವನ್ಯಜೀವಿ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೀತಾ ಎಂ ಪಾಟೀಲ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

2014ರಲ್ಲಿ ಮೀಸಲು ಅರಣ್ಯ ಎಂದು ಘೋಷಿಸಲಾಗಿದ್ದರೂ, 50.30 ಹೆಕ್ಟೇರ್‌ನಲ್ಲಿ  21 ಎಕರೆಯನ್ನು (ಸರ್ವೆ ಸಂಖ್ಯೆ 224) ಗಣಿಗಾರಿಕೆ ನಡೆಸಲು ಕೆ. ಹರೀಶ್ ನಿರಾಕ್ಷೇಪಣಾ ಪ್ರಮಾಣ ಪತ್ರ ನೀಡಿದ್ದಾರೆ. ಡಿಸಿಎಫ್ ಅರಣ್ಯ ಸಂರಕ್ಷಣಾ ಕಾಯ್ದೆ 1980 ಮತ್ತು  ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘಿಸಿ ಮಾರ್ಚ್ 31, 2023 ರಂದು ನಿರಾಕ್ಷೇಪಣಾ ಪ್ರಮಾಣ ಪತ್ರ  ನೀಡಿದ್ದರು.

ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಮೇ 30, 2023 ರಂದು ಸರ್ಕಾರಕ್ಕೆ ವಿವರವಾದ ವರದಿ ಸಲ್ಲಿಸಿದ್ದರು. ಈ ಆದೇಶದಲ್ಲಿ ಕೆ.ಹರೀಶ್‌ ಉನ್ನತ ಅಧಿಕಾರಿಗಳ ಅನುಮತಿಯಿಲ್ಲದೆ ಕೇಂದ್ರ ಕಚೇರಿಯಿಂದ ಹೊರಗೆ ಹೋಗದಂತೆ ಹೆಚ್ಚುವರಿ ಕಾರ್ಯದರ್ಶಿ ಸೂಚಿಸಿದ್ದರು.

ಈ ಸಂಬಂಧ ಒಂದು ವಾರದೊಳಗೆ ವಿಸ್ತೃತ ವರದಿ ಸಲ್ಲಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಅವರಿಗೆ ಸಚಿವರು ಸೂಚಿಸಿದ್ದರು. ಕೆ ಹರೀಶ್ ವಿರುದ್ಧ ವಿಚಾರಣೆ ಬಾಕಿ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com