ವಿಜಯಪುರ: ಬುಧವಾರ ಬೆಳಗ್ಗೆ ಇಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತ ದಂಪತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಲ್ಲು ತೇರದಾಳ (31) ಎಂಬುವವರು ತನ್ನ ಪತ್ನಿ ಗಾಯತ್ರಿ (24) ಅವರೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಟ್ಯಾಂಕರ್ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅವರು ಕಳೆದ ತಿಂಗಳಷ್ಟೇ ಮದುವೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದ್ದು, ಮದುವೆಯಾಗಿ 24 ದಿನಗಳಿಗೆ ಈ ನವ ಜೋಡಿ ಸಾವಿಗೀಡಾಗಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
Advertisement