ಹಾರ, ತುರಾಯಿ ಬದಲು ಪುಸ್ತಕಗಳ ನೀಡಿ: ಸಿಎಂ ಹಾದಿ ಅನುಸರಿಸಿದ ಸಚಿವ ದಿನೇಶ್ ಗುಂಡೂರಾವ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರ ಸೂಚನೆಯ ಮೇರೆಗೆ ಅವರ ಆಪ್ತಕಾರ್ಯದರ್ಶಿ ಕೆ.ಎ. ಹಿದಾಯತ್ತುಲ್ಲ ಅವರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು ಸುತ್ತೋಲೆ ಹೊರಡಿಸುವಂತೆ ನಿರ್ದೇಶನ ನೀಡಿದ್ದಾರೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜಿಲ್ಲೆಯ ಉಸ್ತುವಾರಿಯಾಗಿರುವ ದಿನೇಶ್ ಗುಂಡೂರಾವ್ ಅವರಿಗೆ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದಾಗ ಹಾರ, ತುರಾಯಿ ಬದಲು ಪುಸ್ತಕ ಕೊಡುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾದ ಬೆನ್ನಲ್ಲೇ ತಮಗೆ ಸನ್ಮಾನ ಮಾಡುವ ಸಂದರ್ಭದಲ್ಲಿ ಹಾರ, ಶಾಲು ನೀಡದಂತೆ ಹೇಳಿದ್ದರು, ಅಲ್ಲದೆ, ಕೊಡಲೇಬೇಕೆಂದರೆ ಪುಸ್ತಕಗಳನ್ನು ಕೊಡಿ ಎಂದು ಮನವಿ ಮಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com