ಬೆಂಗಳೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದು 100 ಮೀಟರ್ ಎಳೆದೊಯ್ದು ಡೆಲಿವರಿ ಬಾಯ್ ಸಾವು!

ಬೆಂಗಳೂರಿನ ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು 100 ಮೀಟರ್‌ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿನಗರ ಮೆಟ್ರೋ ನಿಲ್ದಾಣದ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು 100 ಮೀಟರ್‌ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ. ಮೃತರನ್ನು ಪ್ರಸನ್ನಕುಮಾರ್ ಎಂದು ಗುರುತಿಸಲಾಗಿದ್ದು, ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆಯ ನಿವಾಸಿ. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು ಫುಡ್ ಡೆಲಿವರಿ ಆ್ಯಪ್‌ನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.

ಆರೋಪಿ ಚಾಲಕ ವಿನಾಯಕನಿಗೆ ಸಾರ್ವಜನಿಕರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ವಿನಾಯಕ್ ಕಾರು ಶೋ ರೂಂನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತ ತಮ್ಮ ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮೂವರು ಹುಡುಗಿಯರು ಸೇರಿದಂತೆ ಆತನ ಸ್ನೇಹಿತರು ಮದ್ಯದ ಅಮಲಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರು ತಮ್ಮ ಸ್ನೇಹಿತರೊಬ್ಬರನ್ನು ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಗೆ ಬಿಡಲು ಹೋಗುತ್ತಿದ್ದರು.

ಕಾರು ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ನಂತರ ಆರೋಪಿಗಳು ವಾಹನವನ್ನು ನಿಲ್ಲಿಸದೆ ಶವವನ್ನು 100 ಮೀಟರ್‌ವರೆಗೆ ಎಳೆದೊಯ್ದಿದ್ದಾರೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಅಪಘಾತವನ್ನು ಕಂಡ ದಾರಿಹೋಕರು ಒಂದು ಕಿಲೋಮೀಟರ್ ದೂರ ಕಾರನ್ನು ಹಿಂಬಾಲಿಸಿ ಚಾಲಕನನ್ನು ಹಿಡಿದಿದ್ದಾರೆ.

ಮೂವರು ಹುಡುಗಿಯರು ಮತ್ತು ಒಬ್ಬ ಹುಡುಗ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಆಕ್ರೋಶಗೊಂಡ ಗುಂಪು ಕಾರಿನ ಗಾಜುಗಳನ್ನು ಒಡೆದು ಆರೋಪಿಯನ್ನು ಬ್ಯಾಟರಾಯನಪುರ ಸಂಚಾರ ಪೊಲೀಸರಿಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com