ಶಿವಮೊಗ್ಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ; 21 ವರ್ಷದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಶಿವಮೊಗ್ಗ ಜಿಲ್ಲೆಯ ಶರಾವತಿನಗರ ಪ್ರದೇಶದಲ್ಲಿ ಮಂಗಳವಾರ ಮೋಟಾರ್ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶರಾವತಿನಗರ ಪ್ರದೇಶದಲ್ಲಿ ಮಂಗಳವಾರ ಮೋಟಾರ್ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಮೃತರನ್ನು ಗೌತಮ್ ಎಂದು ಗುರುತಿಸಲಾಗಿದೆ. ಮೃತ ಯುವಕ ನಿವೃತ್ತ ನ್ಯಾಯಾಧೀಶ ಶಿವಾನಂದ್ ಅವರ ಪುತ್ರ.

ಕಾಲೇಜಿನ ಗೋಲ್ಡನ್ ಜುಬಿಲಿ ಆಚರಣೆಗಾಗಿ ಸೋಮವಾರ ರಾತ್ರಿ ಕಾಲೇಜಿನಲ್ಲಿ ಉಳಿದುಕೊಂಡಿದ್ದ ಗೌತಮ್ ಮುಂಜಾನೆ ಮನೆಯ ಕಡೆಗೆ ಹೊರಟಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com