ಬಿಎಂಟಿಸಿ ಬಸ್‌ನಲ್ಲಿ ನಗರ ಪೊಲೀಸ್ ಕಮಿಷನರ್ ಪ್ರಯಾಣ, ಮಹಿಳೆಯರ ಸುರಕ್ಷತೆಯ ಬಗ್ಗೆ ಜಾಗೃತಿ!

ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. 
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸೋಮವಾರ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸಿದರು
Updated on

ಬೆಂಗಳೂರು: ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಇತರ ಉನ್ನತ ಪೊಲೀಸ್ ಅಧಿಕಾರಿಗಳು ಸೋಮವಾರ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದರು. 

ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಗರ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಮಹಿಳೆಯರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಲು ಒತ್ತು ನೀಡಿದ ಒಂದು ವಾರದ ನಂತರ ಪೊಲೀಸ್ ಅಧಿಕಾರಿಗಳು ಬಸ್ಸುಗಳಲ್ಲಿ ಪ್ರಯಾಣಿಸಿ ಜಾಗೃತಿ ಮೂಡಿಸಿದರು.

ಕಳೆದ ವಾರ, ನಗರದ ಪೊಲೀಸ್ ಉನ್ನತ ಅಧಿಕಾರಿಗಳು ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಹೊಯ್ಸಳ ವಾಹನಗಳಲ್ಲಿ ಕೆಲವು ಗಂಟೆಗಳ ಕಾಲ ಗಸ್ತು ತಿರುಗಿದರು. ದಯಾನಂದ ಮತ್ತು ಅವರ ತಂಡ ಮಹಿಳಾ ಪ್ರಯಾಣಿಕರೊಂದಿಗೆ ಅವರ ಸಮಸ್ಯೆಗಳನ್ನು ಆಲಿಸಿದರು. 

ಮಹಿಳೆಯರ ಸುರಕ್ಷತೆಗಾಗಿ ನಗರ ಪೊಲೀಸರು ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಿದ ಅವರು, ತುರ್ತು ಸಂದರ್ಭಗಳಲ್ಲಿ 112 ಗೆ ಕರೆ ಮಾಡಲು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com