ದಾವಣಗೆರೆ: ಟಿಪ್ಪರ್ ಲಾರಿ​ ಹರಿದು 2 ವರ್ಷದ ಬಾಲಕಿ ಸಾವು

ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. 
ಅಪಘಾತದಲ್ಲಿ ಮೃತಪಟ್ಟ ಬಾಲಕಿ
ಅಪಘಾತದಲ್ಲಿ ಮೃತಪಟ್ಟ ಬಾಲಕಿ
Updated on

ದಾವಣಗೆರೆ: ಟಿಪ್ಪರ್ ಲಾರಿ ಹರಿದು 2 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ಇಂದು ನಡೆದಿದೆ. 

ಕುಂದುವಾಡ ಗ್ರಾಮದ ನಿವಾಸಿ ಗಣೇಶ್ ಎಂಬವರ ಪುತ್ರಿ ಎರಡುವರೆ ವರ್ಷದ ಚರಸ್ವಿ ಮೃತಪಟ್ಟ ಮಗುವಾಗಿದೆ. ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಮನೆಗೆ ಬರುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕಿ ಮೈಮೇಲೆ ಹರಿದಿದ್ದು ಇದರಿಂದಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿತ್ತು.

ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದ್ದು ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಇನ್ನು ಅಪಘಾತದಿಂದ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. 

ಈ ವೇಳೆ ಗ್ರಾಮಸ್ಥರು ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಒತ್ತಾಯಿಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಹಾಗು ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com