ಮಂಗಳೂರು ಬಳಿ ಕಾರು-ಲಾರಿ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ

ಕಾರು ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರವಿ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಕಾರು ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ರವಿ ಎಂದು ಗುರುತಿಸಲಾಗಿದೆ.

ಲಾರಿ ಚಾಲಕ ಕುಳಾಯಿಯ ಈಶ್ವರ್ (42) ಕಾರು ಪ್ರಯಾಣಿಕರಾದ ನಿತಿನ್, ಚಂದ್ರಶೇಖರ್, ಹರ್ಷ ಮತ್ತು ಜಗದೀಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಸಂಪಾಜೆ ಬಳಿಯ ದೇವರಕೊಲ್ಲಿ ಎಂಬಲ್ಲಿ ಬ್ರೇಕ್ ವೈಫಲ್ಯಗೊಂಡು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಧರ್ಮಸ್ಥಳದಿಂದ ಮಡಿಕೇರಿಗೆ ತೆರಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com