ವಿಪತ್ತು ನಿರ್ವಹಣಾ, ಕಂದಾಯ ಕಾಯ್ದೆ ಪ್ರಕಾರ ಒತ್ತುವರಿ ತೆರವು: ಬಿಬಿಎಂಪಿ ಮುಖ್ಯ ಆಯುಕ್ತ

ಕಂದಾಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಒತ್ತುವರಿ ತೆರವು ಕಾರ್ಯಾಚರಣೆ  ಮಾಡಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಹೇಳಿದ್ದಾರೆ. 
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Updated on

ಬೆಂಗಳೂರು: ಕಂದಾಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಒತ್ತುವರಿ ತೆರವು ಕಾರ್ಯಾಚರಣೆ  ಮಾಡಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗುರುವಾರ ಹೇಳಿದ್ದಾರೆ. ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳು ಈ ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು. 

ನಿವಾಸಿಗಳು ತಮ್ಮ ಆಸ್ತಿಗಳ ಧ್ವಂಸ ಕಾರ್ಯಾಚರಣೆ ನಿಲ್ಲಿಸಲು ನ್ಯಾಯಾಲಯಗಳಿಂದ ತಡೆಯಾಜ್ಞೆ ತಂದಿರುವ ಕುರಿತು ಪ್ರತಿಕ್ರಿಯಿಸಿದ ಗಿರಿನಾಥ್,  ಕಾನೂನು ತಂಡಗಳು ಪರಿಹಾರ ಹುಡುಕುವತ್ತ ಕೆಲಸ ಮಾಡುತ್ತಿವೆ. ವಾಸ್ತವ ಪರಿಸ್ಥಿತಿ ಮತ್ತು ಕಾಮಗಾರಿ ಕಾರ್ಯಗತಗೊಳಿಸಲು ಅನುಸರಿಸಿದ ಕಾರ್ಯಗಳ ಬಗ್ಗೆ ನ್ಯಾಯಾಲಯಗಳಿಗೆ ತಿಳಿಸಲಾಗುತ್ತಿದೆ ಎಂದರು.

ಕೆರೆ ಪುನಶ್ಚೇತನ ಕಾಮಗಾರಿಗೆ ಅಡ್ಡಿಯಾಗುವುದನ್ನು ತಪ್ಪಿಸಲು ಶೆಡ್‌ಗಳನ್ನು ತೆಗೆದು ಕೆರೆಗಳ ಸುತ್ತಲಿನ ಒತ್ತುವರಿ ತೆರವುಗೊಳಿಸಲು ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ಪಾಲುದಾರರೊಂದಿಗೆ ಬಿಬಿಎಂಪಿ ಮಾತುಕತೆ ನಡೆಸುತ್ತಿದೆ ಎಂದು ಅವರು ತಿಳಿಸಿದರು. 

ಕಸ ನಿರ್ವಹಣೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದೋರ್, ಹೈದರಾಬಾದ್ ಮತ್ತು ಚೆನ್ನೈನಂತಹ ಇತರ ನಗರಗಳಲ್ಲಿ ಉತ್ತಮ ಘನತ್ಯಾಜ್ಯ ನಿರ್ವಹಣೆ ಯೋಜನೆಗಳನ್ನು ಅಧ್ಯಯನ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಘನತ್ಯಾಜ್ಯ ನಿರ್ವಹಣೆಯ ಅತ್ಯುತ್ತಮ ಅಭ್ಯಾಸಗಳನ್ನು ಹೊಂದಿರುವ ಸ್ಥಳಗಳಿಗೂ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು. 

ಬೀದಿನಾಯಿ ಗಣತಿ ಆರಂಭವಾಗಲಿದ್ದು, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನಿಯಮಗಳ ಪ್ರಕಾರ, ಅಧಿಕೃತ ಮತ್ತು ನೋಂದಣಿಯಾಗಿರುವ ಎನ್‌ಜಿಒಗಳು ಮತ್ತು ಸಂಸ್ಥೆಗಳು ಮಾತ್ರ ಪ್ರಾಣಿಗಳ ಜನನ ನಿಯಂತ್ರಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಅವರಲ್ಲಿ ಕೆಲವೇ ಕೆಲವು ಇರುವುದರಿಂದ, ಬಿಬಿಎಂಪಿಯೊಂದಿಗೆ ಈ ಹಿಂದೆ ಕೆಲಸ ಮಾಡಿದ ಹಳೆಯ ಸಂಸ್ಥೆಗಳನ್ನು ಸಹ ಸೆಳೆಯಲು ಬಿಬಿಎಂಪಿ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದರು. 

ಈ ಮಧ್ಯೆ  ಬಿಬಿಎಂಪಿ ವಲಯ ಆಯುಕ್ತರು ಪಾರ್ಟಿ ಹಾಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಕ್ಯಾಟರರ್‌ಗಳಿಗೆ ಏಕಕಾಲದಲ್ಲಿ ಬಳಸುವ ಪ್ಲಾಸ್ಟಿಕ್ ನಿಷೇಧಿಸುವಂತೆ ಸೂಚಿಸಿದ್ದಾರೆ. ಅಡುಗೆ ವಸ್ತುಗಳನ್ನು ಉಕ್ಕು ಅಥವಾ ಪರಿಸರ ಸ್ನೇಹಿ ವಸ್ತುಗಳೊಂದಿಗೆ ಬದಲಾಯಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com