ಮೈಸೂರು: ನಗರದ ವಿಶ್ವೇಶ್ವರಯ್ಯ ವೃತ್ತದ ಬಳಿ ಇರುವ ಎಸ್.ಎಸ್. ಸಾಮಿಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.
ಮೃತರನ್ನು ವೆಂಕಟೇಶ್ ಮತ್ತು ಷಣ್ಮುಗ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಶಾಮಿಲ್ನಲ್ಲೇ ವಾಸವಿದ್ದರು. ಪ್ರತಿದಿನ ಶಾಮಿಲ್ ಒಳಗೆ ಮಲಗುತ್ತಿದ್ದ ವೆಂಕಟೇಶ್ ಬೆಳಗ್ಗೆ ಬೇಗ ಎದ್ದು ಕೆಲಸದಲ್ಲಿ ನಿರತರಾಗುತ್ತಿದ್ದರು.
ಆದರೆ, ಗುರುವಾರ ಬೆಳಗ್ಗೆ 7 ಗಂಟೆಯಾದರೂ ಹೊರಗೆ ಬಂದಿರಲಿಲ್ಲ. ಇದರಿಂದಾಗಿ ಅಕ್ಕಪಕ್ಕದ ಮನೆಯವರು ಅನುಮಾಗೊಂಡು ಶಾಮಿಲ್ನ ಮಾಲೀಕರಿಗೆ ವಿಚಾರ ತಿಳಿಸಿದ್ದರು.
ಬಳಿಕ ಮಾಲೀಕರು ಶಾಮಿಲ್ಗೆ ಬಂದು ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮಾಲೀಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಹತ್ಯೆಯಾದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.
Advertisement