ಹುಣಸೂರು: ಸಾಮಿಲ್‍ನಲ್ಲಿ ಜೋಡಿ ಕೊಲೆ

ನಗರದ ವಿಶ್ವೇಶ್ವರಯ್ಯ ವೃತ್ತದ ಬಳಿ ಇರುವ ಎಸ್.ಎಸ್. ಸಾಮಿಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ನಗರದ ವಿಶ್ವೇಶ್ವರಯ್ಯ ವೃತ್ತದ ಬಳಿ ಇರುವ ಎಸ್.ಎಸ್. ಸಾಮಿಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಮೃತರನ್ನು ವೆಂಕಟೇಶ್ ಮತ್ತು ಷಣ್ಮುಗ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಣ್ಣಪುಟ್ಟ ಕೆಲಸ ಮಾಡಿಕೊಂಡು ಶಾಮಿಲ್​​ನಲ್ಲೇ ವಾಸವಿದ್ದರು. ಪ್ರತಿದಿನ ಶಾಮಿಲ್ ಒಳಗೆ ಮಲಗುತ್ತಿದ್ದ ವೆಂಕಟೇಶ್ ಬೆಳಗ್ಗೆ ಬೇಗ ಎದ್ದು ಕೆಲಸದಲ್ಲಿ ನಿರತರಾಗುತ್ತಿದ್ದರು.

ಆದರೆ, ಗುರುವಾರ ಬೆಳಗ್ಗೆ 7 ಗಂಟೆಯಾದರೂ ಹೊರಗೆ ಬಂದಿರಲಿಲ್ಲ. ಇದರಿಂದಾಗಿ ಅಕ್ಕಪಕ್ಕದ ಮನೆಯವರು ಅನುಮಾಗೊಂಡು ಶಾಮಿಲ್​ನ ಮಾಲೀಕರಿಗೆ ವಿಚಾರ ತಿಳಿಸಿದ್ದರು.

ಬಳಿಕ ಮಾಲೀಕರು ಶಾಮಿಲ್​​ಗೆ ಬಂದು ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮಾಲೀಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಪೋಲಿಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ. ಹತ್ಯೆಯಾದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com