ಅಪರಾಧ ನಡೆದ ಸ್ಥಳಗಳಿಗೆ ಭೇಟಿ ಕೊಟ್ಟು, ತನಿಖೆಗೆ ಮಾರ್ಗದರ್ಶನ ನೀಡಿ: ಅಧಿಕಾರಿಗಳಿಗೆ ಡಿಜಿ ಅಲೋಕ್ ಮೋಹನ್ ಸೂಚನೆ

ಅಪರಾಧ ನಡೆದ ಸ್ಥಳಗಳಿಗೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನಗಳ ನೀಡಿ ಎಂದು ಎಸ್'ಪಿ, ಡಿಸಿಪಿಗಳಿಗೆ ಪೊಲೀಸ್ ಮಹಾನಿರೀಕ್ಷಕ ಅಲೋಕ್ ಮೋಹನ್ ಅವರು ಗುರುವಾರ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಭೆಯಲ್ಲಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ಬಿ ದಯಾನಂದ.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಭೆಯಲ್ಲಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ಬಿ ದಯಾನಂದ.
Updated on

ಬೆಂಗಳೂರು: ಅಪರಾಧ ನಡೆದ ಸ್ಥಳಗಳಿಗೆ ಭೇಟಿ ನೀಡಿ, ತನಿಖೆಗೆ ಮಾರ್ಗದರ್ಶನಗಳ ನೀಡಿ ಎಂದು ಎಸ್'ಪಿ, ಡಿಸಿಪಿಗಳಿಗೆ ಪೊಲೀಸ್ ಮಹಾನಿರೀಕ್ಷಕ ಅಲೋಕ್ ಮೋಹನ್ ಅವರು ಗುರುವಾರ ಸೂಚನೆ ನೀಡಿದ್ದಾರೆ.

ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಡಿಜಿಪಿ ಅಲೋಕ್ ಕುಮಾರ್ ಅವರು, ಸಭೆಯಲ್ಲಿ ಪರಿಣಾಮಕಾರಿ ತನಿಖೆಯ ಅಗತ್ಯವನ್ನು ಒತ್ತಿ ಹೇಳಿದರು. ಅಪರಾಧಗಳನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದರು.

ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪ್ರಕರಣಗಳ ಮೇಲೆ ನಿಗಾ ಇಡಬೇಕು. ಸೂಕ್ಷ್ಮ ಪ್ರಕರಣಗಳ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕು. ಗಂಭೀರ ಅಪರಾಧಗಳ ಕೃತ್ಯಗಳಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಲು ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಗಸ್ತು ತಿರುವುದನ್ನು ಪರಿಣಾಮಕಾರಿಯಾಗಿ ಮಾಡಬೇಕು. ಅಪರಾಧ ಕೃತ್ಯಗಳ ತಡೆಯಲು ಮತ್ತಷ್ಟು ಸಿಬ್ಬಂದಿಗಳು ಗಸ್ತು ತಿರುಗಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com