ಪತ್ನಿಯೊಂದಿಗೆ ಅಕ್ರಮ ಸಂಬಂಧ: ಸ್ನೇಹಿತನ ಕತ್ತು ಕೊಯ್ದು ರಕ್ತ ಕುಡಿದ ಪತಿರಾಯ!

ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.
ಕತ್ತು ಸೀಳಿದ ವ್ಯಕ್ತಿ
ಕತ್ತು ಸೀಳಿದ ವ್ಯಕ್ತಿ
Updated on

ಕೋಲಾರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ರಕ್ತ ಕುಡಿದ ಭೀಭತ್ಸ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಚಿಂತಾಮಣಿಯ ಗಾಂಧಿನಗರದ ವಿಜಯ್ ಎಂಬಾತ ಚೇಳೂರು ತಾಲ್ಲೂಕಿನ ಮಂಡಪಲ್ಲಿಯ ಮಾರೇಶ್ ಎಂಬುವವರ ಕತ್ತನ್ನು ಕೊಯ್ದು ರಕ್ತ ಕುಡಿದ್ದಾನೆ. ಕೃತ್ಯವನ್ನು ವಿಜಯ್ ವಿಡಿಯೊ ಮಾಡಿಸಿದ್ದಾನೆ. 

ವಿಜಯ್ ಮತ್ತು ಮಾರೇಶ್ ಸ್ನೇಹಿತರಾಗಿದ್ದು ಬಟ್ಟೆ ವ್ಯಾಪಾರ ಮಾಡುತಿದ್ದರು. ನಾಲ್ಕು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ಭೀಭತ್ಸ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಾರೇಶ್ ಚಿಕಿತ್ಸೆ ಪಡೆದು ಮನೆಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com