ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ(Bengaluru-Mysuru expressway) ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಡ್ಯ/ಮೈಸೂರು: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ(Bengaluru-Mysuru expressway) ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 

ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ ನಡೆದಿದೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವ ಸವಾರರು ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.

ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಮೇಲ್ಸೇತುವೆ  ಮೇಲೆ ನಡೆದಿದೆ. ಮೃತರನ್ನು 25 ವರ್ಷದ ಮಣಿ ಮತ್ತು 21 ವರ್ಷದ ಯುವಕ ಜನಾರ್ಧನ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಾವಿನ ಏಕ್ಸ್ ಪ್ರೆಸ್ ವೇ ಎಂಬ ಕುಖ್ಯಾತಿ: ಈ ಎಕ್ಸ್ ಪ್ರೆಸ್ ವೇಯಲ್ಲಿ ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಮೃತಪಟ್ಟಿದ್ದಾರೆ. 190 ಜನರಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com