ಜುಲೈ 3ರಿಂದ ಬಜೆಟ್ ಅಧಿವೇಶನ: ಆಯ್ಕೆಯಾಗದ ವಿರೋಧ ಪಕ್ಷದ ನಾಯಕ; ಸರ್ಕಾರ ತರಾಟೆ ತೆಗೆದುಕೊಳ್ಳಲು ಬಿಜೆಪಿ ಸಜ್ಜು!

ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಜುಲೈ 3 ರಂದು ಆರಂಭವಾಗಲಿರುವ ಅಧಿವೇಶನ ಜುಲೈ 14 ರಂದು ಕೊನೆಗೊಳ್ಳಲಿದೆ.
ವಿಧಾನಸಭೆ ಅಧಿವೇಶನ (ಸಂಗ್ರಹ ಚಿತ್ರ)
ವಿಧಾನಸಭೆ ಅಧಿವೇಶನ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7 ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷ ಬಿಜೆಪಿ, ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನೀಡಿದ ಐದು ಭರವಸೆಗಳ ಜಾರಿ ವಿಳಂಬ, ಹಿಂದಿನ ಬೊಮ್ಮಾಯಿ ಜಾರಿಗೊಳಿಸಿದ್ದ ಹಲವು ಕಾನೂನುಗಳನ್ನು ಹಿಂಪಡೆಯುವುದು ಸೇರಿದಂತೆ ಹಲವು ವಿಷಯಗಳಲ್ಲಿ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿದೆ.

ಜುಲೈ 3 ರಂದು ಆರಂಭವಾಗಲಿರುವ ಅಧಿವೇಶನ ಜುಲೈ 14 ರಂದು ಕೊನೆಗೊಳ್ಳಲಿದೆ. ಮೂಲಗಳ ಪ್ರಕಾರ ಸದನದ ಒಳಗೆ ಮತ್ತು ಹೊರಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮುಂದಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗ್ಯಾರಂಟಿ ಜಾರಿಗೆ ಒತ್ತಾಯಿಸಿ ವಿಧಾನಸೌಧದ ಹೊರಗೆ ಧರಣಿ ನಡೆಸಲು ಯೋಜಿಸುತ್ತಿದ್ದಾರೆ. ಬಿಜೆಪಿ ಶಾಸಕರು ಮತ್ತು ಎಂಎಲ್‌ಸಿಗಳು ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಲು ತಮ್ಮ ಅಸ್ತ್ರಗಳನ್ನು ಸಜ್ಜುಗೊಳಿಸುತ್ತಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿ ಜಾರಿ ವಿಳಂಬದ ಬಗ್ಗೆ ತಮ್ಮ ಗಮನ ಹರಿಸಲಾಗುವುದು. ಚುನಾವಣೆಯ ಮೊದಲು, ಕಾಂಗ್ರೆಸ್ ಎಲ್ಲರಿಗೂ ಉಚಿತ ಎಂದು ಘೋಷಿಸಿತು. ಆದರೆ ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದು ಯೋಜನೆಗೂ ಷರತ್ತುಗಳನ್ನು ಸೇರಿಸುತ್ತಿದ್ದಾರೆ. ನಾವು ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.  ಬಿಜೆಪಿ ಸರ್ಕಾರದ ಅವಧಿಯ ಪಠ್ಯಪುಸ್ತಕಗಳಿಂದ ಕೆಲವು ಅಧ್ಯಾಯಗಳನ್ನು ಹಿಂಪಡೆಯಲು ಅವರು ನಿರ್ಧರಿಸಿದ್ದಾರೆ.  ಈ ಸಂಬಂಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತೇವೆ ಎಂದರು.

ಇದೆಲ್ಲದರ ನಡುವೆ ಬಿಜೆಪಿ ಇನ್ನೂ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಿಲ್ಲ ಮತ್ತು ಇದು ಕೆಲವು ಶಾಸಕರಿಗೆ ಸರಿಯಾಗಿ ಹೋಗಿಲ್ಲ. ನಾವು ಹೈಕಮಾಂಡ್‌ನ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ. ನಮಗೆ ಆಕ್ರಮಣಕಾರಿ ನಾಯಕನ ಅಗತ್ಯವಿದೆ ಮತ್ತು ನಿರ್ಧಾರವನ್ನು ಈಗಲೇ ತೆಗೆದುಕೊಳ್ಳಬೇಕಾಗಿತ್ತು, ಎಂದು ಪಕ್ಷದ ಒಳಗಿನವರು  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com