ಬೀದರ್: ಗುರುನಾನಕ್ ಝರಾ ಗುರುದ್ವಾರಕ್ಕೆ ಅಮಿತ್ ಶಾ ಭೇಟಿ, ಪ್ರಾರ್ಥನೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಂದು ಬೀದರ್ ನಲ್ಲಿಂದು ಗುರುನಾನಕ್ ಝರಾ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ
ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ
Updated on

ಬೀದರ್: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಂದು ಬೀದರ್ ನಲ್ಲಿಂದು ಗುರುನಾನಕ್ ಝರಾ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ,  ಸಿಖ್ ಧರ್ಮದ ಪಂಜ್ ಪ್ಯಾರೆಗಳಲ್ಲಿ ಒಬ್ಬರಾದ ಬಾಯಿ ಸಾಹಿಬ್ ಸಿಂಗ್ ಇಲ್ಲಿ ಜನಿಸಿದರು. ಈ ಗುರುದ್ವಾರ ದೇಶದ ಎರಡನೇ  ಪಂಜಾ ಸಾಹಿಬ್ ಆಗಿದೆ. ವಾಹೆಗುರು  ದೇಶವಾಸಿಗಳಿಗೆ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದ್ದಾರೆ.

ನಂತರ ಬೀದರ್ ನ ಬಸವ ಕಲ್ಯಾಣದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಪಾಲ್ಗೊಂಡರು. ಸಂಜೆ ದೇವನಹಳ್ಳಿಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ತದನಂತರ ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com