ಬೆಂಗಳೂರು: ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿದ್ದ 300 ಬೆಣ್ಣೆ ಹಣ್ಣಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ

ಬಿಡದಿಯ ಕೊಡಿಯಾಲ ಕರೇನಹಳ್ಳಿಯಲ್ಲಿ 42 ವರ್ಷದ ರತ್ನ ಅವರ ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದಿದ್ದ 300 ಬೆಣ್ಣೆ ಹಣ್ಣಿನ ಮರಗಳನ್ನು ಅಪರಿಚಿತ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. 
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಬಿಡದಿಯ ಕೊಡಿಯಾಲ ಕರೇನಹಳ್ಳಿಯಲ್ಲಿ 42 ವರ್ಷದ ರತ್ನ ಅವರ ಎರಡು ಎಕರೆಗೂ ಹೆಚ್ಚು ಜಮೀನಿನಲ್ಲಿ ಬೆಳೆದಿದ್ದ 300 ಬೆಣ್ಣೆ ಹಣ್ಣಿನ ಮರಗಳನ್ನು ಅಪರಿಚಿತ ದುಷ್ಕರ್ಮಿಗಳು ಸುಟ್ಟು ಹಾಕಿದ್ದಾರೆ. 

ರತ್ನ ಅವರು ಈ ಬೇಸಿಗೆಯಲ್ಲಿ ಹಣ್ಣುಗಳನ್ನು ಮಾರಾಟ ಮಾಡಿ ಲಾಭ ಗಳಿಸಿದ್ದರು. ಮರಗಳಲ್ಲದೆ, ನೀರಿನ ಪೈಪ್‌ಗಳು ಮತ್ತು ಯಂತ್ರಗಳು ಸಹ ಸುಟ್ಟುಹೋಗಿವೆ. ಇಡೀ ಪ್ರದೇಶವು ಸುಟ್ಟು ಕಲಕಲಾಗಿದೆ. ಸುಮಾರು 10 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ವಾಣಿಜ್ಯ ಬೆಳೆಗಳನ್ನು ರಕ್ಷಿಸಲು ಕಾಂಪೌಂಡ್ ಗೋಡೆ ನಿರ್ಮಿಸಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. 

ಟಿಎನ್ಐಇ ಜೊತೆಗೆ ಮಾತನಾಡಿದ ರತ್ನ, ಇದು ಹಣ್ಣುಗಳನ್ನು ಕೀಳುವ ಸಮಯ. ದುಷ್ಕರ್ಮಿಗಳು ಕಾಂಪೌಂಡ್ ಗೋಡೆಯನ್ನು ಹಾರಿ ಮರಗಳಿಗೆ ಬೆಂಕಿ ಹಚ್ಚಿದ್ದಾರೆ. ನಮ್ಮ ಸಂಬಂಧಿಕರೊಬ್ಬರು ಬೆಳೆಗಳನ್ನು ನೋಡಿಕೊಳ್ಳುತ್ತಿದ್ದರು ಮತ್ತು ಅವರ ಅನುಪಸ್ಥಿತಿಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಿದರು. ನಾಲ್ಕು ವರ್ಷಗಳ ಹಿಂದೆ ಬೆಳೆ ಬೆಳೆಯಲು ಪ್ರಾರಂಭಿಸಿದ್ದರು. 'ದುಷ್ಕರ್ಮಿಗಳು ಬೆಳೆಗಳಿಗೆ ಹೇಗೆ ಬೆಂಕಿ ಹಚ್ಚಿದರು ಎಂಬುದನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ' ಎಂದು ತಿಳಿಸಿದರು.

ಹತ್ತಿರದಲ್ಲಿ ಎಲ್ಲೂ ಸಿಸಿಟಿವಿ ಇಲ್ಲ. ದುಷ್ಕರ್ಮಿಗಳು ಸಾಕಷ್ಟು ಗಮನಿಸಿದ ಬಳಿಕ ಕೃತ್ಯ ಎಸಗಿದ್ದಾರೆ. ಸುತ್ತಮುತ್ತಲಿನಲ್ಲಿ ಮಳೆಗಾಲದಲ್ಲಿ ಬೆಳೆಗಳನ್ನು ಬೆಳೆಯುವ ಬಯಲು ಪ್ರದೇಶಗಳಿವೆ ಎಂದು ದೂರುದಾರರು ತಿಳಿಸಿದ್ದಾರೆ.

ಆರೋಪಿಗಳು ಸ್ಥಳೀಯರೇ ಆಗಿರಬಹುದು. ಒಳಗಿನವರ ಕೈವಾಡವಿರುವ ಸಾಧ್ಯತೆಯನ್ನು ತಳ್ಳಿಹಾಕುತ್ತಿಲ್ಲ ಎಂದು ಇಡಾಡಿ ಪೊಲೀಸರು ತಿಳಿಸಿದ್ದು, ಐಪಿಸಿ ಸೆಕ್ಷನ್ 435 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com