ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶ

ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಗು ಸಾವು
ಮಗು ಸಾವು
Updated on

ದೇವನಹಳ್ಳಿ: ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಓವರ್ ಡೋಸ್ ನೀಡಲಾಗಿದ್ದು ವೈದ್ಯರ ನಿರ್ಲಕ್ಷ್ಯವೇ ಮಗುವಿನ ಕಾರಣ ಎಂದು ಪೋಷಕರು ಆಸ್ಪತ್ರೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.

ಹೊಸಕೋಟೆ ತಾಲೂಕಿನ ಕಂಬಳಿಪುರ ನಿವಾಸಿ ವೇಣುಗೋಪಾಲ್ ಎಂಬುವರ 6 ತಿಂಗಳ ಮಗು ಮೃತಪಟ್ಟಿದ್ದು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 

ಮಗುವಿನ ಸಾವಿನ ನಂತರ ಆಸ್ಪತ್ರೆಗೆ ಮುತ್ತಿಗೆ ಹಾಕಿದ ಪೋಷಕರು, ಸಂಬಂಧಿಕರು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರ ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com