ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್

ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.
ಅಗ್ನಿ ಅವಘಡ
ಅಗ್ನಿ ಅವಘಡ
Updated on

ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲರ್ ಆಗಿದೆ.

ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com