ಪೂರ್ಣಗೊಳ್ಳದ ಎಕ್ಸ್‌ಪ್ರೆಸ್‌ವೇ ತೆರೆಯಲು ಆತುರ ಏಕೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ಒಂದು ದಿನ ಮೊದಲು, ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಯೋಜನೆಯು ಪೂರ್ಣಗೊಳ್ಳದಿದ್ದರೂ ಸರ್ಕಾರವು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದೆ.
ರಣದೀಪ್ ಸಿಂಗ್ ಸುರ್ಜೇವಾಲಾ
ರಣದೀಪ್ ಸಿಂಗ್ ಸುರ್ಜೇವಾಲಾ
Updated on

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುವ ಒಂದು ದಿನ ಮೊದಲು, ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಯೋಜನೆಯು ಪೂರ್ಣಗೊಳ್ಳದಿದ್ದರೂ ಸರ್ಕಾರವು ಕಾರ್ಯಕ್ರಮವನ್ನು ಮುಂದುವರಿಸುತ್ತಿದೆ ಎಂದು ಆರೋಪಿಸಿದೆ.

ಪೂರ್ಣಗೊಳ್ಳದ ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಯು ಹತಾಶೆ, ಪ್ರಯಾಣಿಕರ ಜೀವಕ್ಕೆ ಅಪಾಯ, ಟೋಲ್ ವಸೂಲಿಯಿಂದ ಲಾಭ, ದೋಷಪೂರಿತ ರಸ್ತೆ ವಿನ್ಯಾಸ, ನೀರಿನ ಹರಿವಿನ ನೈಸರ್ಗಿಕ ತಡೆ, ಪ್ರವಾಹ ನಿಯಂತ್ರಣ ಕ್ರಮಗಳ ಅನುಪಸ್ಥಿತಿ ಮತ್ತು ತಮ್ಮ ಸ್ವಂತ ಭೂಮಿಗೆ ಪ್ರವೇಶಿಸಲಾಗದ ವಿಷಯದಲ್ಲಿ ರೈತರಿಗೆ ಭಾರಿ ಅನ್ಯಾಯ ಸೇರಿದಂತೆ ಹಲವು ಪ್ರಶ್ನೆಗಳಿಗೆ ಮೋದಿ ಮತ್ತು ರಾಜ್ಯ ಸರ್ಕಾರ ಉತ್ತರಿಸಬೇಕಿದೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಅರೆಬೆಂದ, ಛಿದ್ರವಾಗಿರುವ, ತೇಪೆಯಾಗಿರುವ ಮತ್ತು ಪೂರ್ಣಗೊಳ್ಳಲು ಬಹಳ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಿ ಏಕೆ ಉದ್ಘಾಟಿಸುತ್ತಿದ್ದಾರೆ. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಬದಿಯ ಸರ್ವೀಸ್ ರಸ್ತೆಗಳು ಪೂರ್ಣಗೊಂಡಿಲ್ಲ. ಇಂಡಿಯನ್ ರೋಡ್ ಕಾಂಗ್ರೆಸ್ ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಎಕ್ಸ್‌ಪ್ರೆಸ್‌ವೇ ನಿರ್ಮಿಸಿಲ್ಲ ಎಂದು ಅವರು ಆರೋಪಿಸಿದರು.

'ಹಲವೆಡೆ ಅವೈಜ್ಞಾನಿಕವಾಗಿ ನಿರ್ಮಾಣವಾಗಿದೆ. ಅಕ್ಟೋಬರ್ 2022 ರಿಂದ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ 300 ಅಪಘಾತಗಳು, 90 ಸಾವುಗಳು ಮತ್ತು 122 ಗಂಭೀರ ಗಾಯಗಳಾಗಿವೆ. ಆದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ನಿಷ್ಕ್ರಿಯವಾಗಿವೆ. ಸಾರ್ವಜನಿಕ ಸುರಕ್ಷತೆಯ ಅಪಾಯದ ಬಗ್ಗೆ ಪ್ರಧಾನಿ ಏಕೆ ನಿರ್ಲಕ್ಷಿಸಿದ್ದಾರೆ' ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com