ನವಿಲು ಗರಿ ಹಾರ ತಂದ ಸಂಕಷ್ಟ: ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯಗೆ ಬಂಧನ ಭೀತಿ

ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.
ದರ್ಶನ್ ಪುಟ್ಟಣ್ಣಯ್ಯ
ದರ್ಶನ್ ಪುಟ್ಟಣ್ಣಯ್ಯ
Updated on

ಮೈಸೂರು: ಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ.

ಕ್ಷೇತ್ರದಾದ್ಯಂತ ಪಾದಯಾತ್ರೆ ಮಾಡುತ್ತಿರುವ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಪಾಂಡವಪುರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅವರ ಅಭಿಮಾನಿಯೊಬ್ಬರು ಬೃಹತ್ ನವಿಲುಗರಿಯ ಹಾರವನ್ನು ಹಾಕಿ, ಸನ್ಮಾನಿಸಿದರು. ಈ ಹಾರವೇ ಇದೀಗ ಪುಟ್ಟಣ್ಣಯ್ಯ ಅವರಿಗೆ ಸಂಕಷ್ಟವನ್ನು ಎದುರು ಮಾಡಿದೆ.

ದರ್ಶನ್ ಅವರು ನವಿಲುಗರಿಗಳ ಹಾರ ಧರಿಸಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವನ್ಯಜೀವಿ ಕಾರ್ಯಕರ್ತರು, ಪುಟ್ಟಣ್ಣಯ್ಯ ಹಾಗೂ ಅವರ ಬೆಂಬಲಿಕರ ವಿರುದ್ಧ ದೂರು ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ಅನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಅರಣ್ಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com