ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ಕೆಪಿಟಿಸಿಎಲ್ ಮತ್ತು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದ್ದು, ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಟಿಸಿಎಲ್ ನೌಕರರ ಶೇ.20 ರಷ್ಟು ವೇತನ ಮತ್ತು ಸಾರಿಗೆ ನೌಕರರ ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಇಂದೇ ಅಧಿಕೃತ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು.

ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದು. ನೌಕರರ ಸಂಘದ ಜೊತೆಗೆ ಸರ್ಕಾರ ಸರಣಿ ಮಾತುಕತೆಗಳನ್ನು ನಡೆಸುತ್ತಲೇ ಇದೆ.

ನೌಕರರ ಬೇಡಿಕೆ ಹಿನ್ನೆಲೆಯಲ್ಲಿ ಶೇ. 10 ರಷ್ಟು ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ಕೊಟ್ಟಿದ್ದರು. ಆದರೆ. ಇದಕ್ಕೆ ಸಾರಿಗೆ ನೌಕರರು ಒಪ್ಪಿಗೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಶೇ.15 ರಷ್ಟು ಏರಿಕೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com