ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ!

ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸಾರಿಗೆ ನೌಕರರ ವೇತನ ಶೇಕಡ 15ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದ್ದರೂ ಇದಕ್ಕೆ ಒಪ್ಪದ ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ನಾಳೆಯಿಂದ ಮುಷ್ಕರ ನಡೆಸುವುದಾಗಿ ಘೋಷಿಸಿದ್ದರು. 

ಇದೀಗ ಹೈಕೋರ್ಟ್ ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆ ನೀಡಿದೆ. ರಾಜ್ಯದಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು ಮುಷ್ಕರದಿಂದ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಮೂರು ವಾರಗಳ ಕಾಲ ಮುಷ್ಕರ ನಡೆಸಬಾರದು ಎಂದು ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ಅಶೋಕ್ ಎಸ್.ಕಿಣಗಿ ಅವರಿದ್ದ ಪೀಠ ಸಂಘಟನೆಗಳಿಗೆ ಸೂಚನೆ ನೀಡಿದೆ.

ಸಾರಿಗೆ ನೌಕರರ ಸಂಘದ ಸಮಾನ ಮನಸ್ಕರ ವೇದಿಕೆಯ ಮುಷ್ಕರನ್ನು ಪ್ರಶ್ನಿಸಿ ಹೆಚ್ ಎಂ ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಹಾಕಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ ತಡೆ ನೀಡಿದೆ. 

ಮಾರ್ಚ್ 21ರಂದೇ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಈ ವೇಳೆ ರಾಜ್ಯ ಸರ್ಕಾರ ಶೇಕಡ 15ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ ಈಗ ಮತ್ತೆ ಸಮಾನ‌ ಮನಸ್ಕರ ವೇದಿಕೆ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಮುಖಂಡ ಚಂದ್ರು ನಾಲ್ಕು ನಿಗಮದ ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com