ಎಸ್‌ಸಿ ಮೀಸಲಾತಿಯಿಂದ ಲಂಬಾಣಿ, ಕೊಂಚ ಸಮುದಾಯ ಕೈಬಿಡಲು ಬಿಜೆಪಿ ಸಂಚು: ಎಂಎಲ್‌ಸಿ ಪ್ರಕಾಶ್ ರಾಥೋಡ್

ಎಸ್‌ಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಸರ್ಕಾರದ ನಿರ್ಧಾರ ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಕಾನೂನು ಉಲ್ಲಂಘನೆ ಎಂದು ಕಾಂಗ್ರೆಸ್ ಎಂಎಲ್‌ಸಿ ಪ್ರಕಾಶ್ ರಾಥೋಡ್  ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರಕಾಶ್ ರಾಥೋಡ್ 
ಪ್ರಕಾಶ್ ರಾಥೋಡ್ 
Updated on

ವಿಜಯಪುರ: ಎಸ್‌ಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಸರ್ಕಾರದ ನಿರ್ಧಾರ ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಕಾನೂನು ಉಲ್ಲಂಘನೆ ಎಂದು ಕಾಂಗ್ರೆಸ್ ಎಂಎಲ್‌ಸಿ ಪ್ರಕಾಶ್ ರಾಥೋಡ್  ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಲಂಬಾಣಿ, ಕೊಂಚ, ಕೊರಮ ಮತ್ತು ಭೋವಿ ಸಮುದಾಯಗಳನ್ನು ಎಸ್‌ಸಿ ಮೀಸಲಾತಿಯಿಂದ ತೆಗೆದುಹಾಕಲು ಷಡ್ಯಂತ್ರ ರೂಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಒಳ ಮೀಸಲಾತಿಯನ್ನು ನೀಡುವ ನಿರ್ಧಾರವು ಚುನಾವಣಾ ದಿನಾಂಕದ ಮೊದಲು ತೆಗೆದುಕೊಂಡ ರಾಜಕೀಯ ಗಿಮಿಕ್ ಹೊರತು ಬೇರೇನೂ ಅಲ್ಲ. ಮೀಸಲಾತಿ ಸೌಲಭ್ಯದಿಂದ ವಂಚಿತರಾಗಲಿರುವ ಲಂಬಾಣಿ ಸಮುದಾಯ ಈ ನಿರ್ಧಾರವನ್ನು ಸಹಿಸುವುದಿಲ್ಲ. ನಾವು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಮತ್ತು ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ರಾಥೋಡ್ ಹೇಳಿದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ನಡೆಸಿದ ನಂತರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಅವರು ಮೊದಲು ಘೋಷಿಸಿದ್ದರು. ಆದರೆ ಈಗ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಅಥವಾ ಸದಾಶಿವ ಸಮಿತಿಯ ವರದಿಯನ್ನು ಸಾರ್ವಜನಿಕ ಒಳಮೀಸಲಾತಿಗೆ ಒಳಪಡಿಸದೆ, ವರದಿಯನ್ನು ಅಧ್ಯಯನ ಮಾಡಲು ರಚಿಸಲಾದ ಸಂಪುಟ ಉಪ ಸಮಿತಿಯ ವರದಿಯನ್ನು ಆಧರಿಸಿ ಸರ್ಕಾರವು ನಿರ್ಧಾರಗಳನ್ನು ತೆಗೆದುಕೊಂಡಿದೆ.

ಬಿಜೆಪಿ ಸರಕಾರದಿಂದ ಆಗಿರುವ ಅನ್ಯಾಯದ ವಿರುದ್ಧ ತಮ್ಮ ಪ್ರತಿಭಟನೆಯ ಗುರುತಾಗಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಬಿಜೆಪಿಯ ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳಿಗೆ ಕಾಂಗ್ರೆಸ್ ನಾಯಕ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com