
ದಾವಣಗೆರೆ: ವಿಧಾನಸಭೆ ಚುನಾವಣಗೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಾಗಿದೆ. ಹೀಗಿದ್ದರೂ ಕೂಡ ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಎಸ್.ಎಸ್ ಮತ್ತು ಎಸ್ ಎಸ್ ಎಂ ಅಭಿಮಾನಿ ಬಳಗದ ಹೆಸರಿನಲ್ಲಿ ಜನರಿಗೆ ಗಿಫ್ಟ್ ಹಂಚುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ಮಾಡಿದ್ದು, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದಾವಣಗೆರೆಯ ಕೆಟಿಜೆ ನಗರದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
7.19 ಲಕ್ಷ ರೂ. ಮೌಲ್ಯದ ದೋಸೆ ಹೆಂಚು ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಜನರಿಗೆ ಆಮಿಷ ತೋರಿಸಿ ಗಿಫ್ಟ್ ಹಂಚುತ್ತಿದ್ದ ಬಗ್ಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಎ1, ಎಸ್.ಎಸ್.ಮಲ್ಲಿಕಾರ್ಜುನ್ ಎ2 ಆರೋಪಿಗಳನ್ನಾಗಿಸಿ ಎಫ್.ಐ.ಆರ್. ದಾಖಲು ಮಾಡಲಾಗಿದೆ.
Advertisement