ಮಂಗಳೂರು: ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಮಂಗಳೂರಿನ ಲಾಡ್ಜ್‌ನಲ್ಲಿ ಶುಕ್ರವಾರ ಬೆಳಗ್ಗೆ  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಮೈಸೂರಿನ ವಿಜಯನಗರದ 46 ವರ್ಷ ವಯಸ್ಸಿನ ದೇವೇಂದ್ರ, ಅವರ ಪತ್ನಿ ಮತ್ತು 14 ಮತ್ತು 10 ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ.

ಮಂಗಳೂರಿನ ಕೆಎಸ್ ರಾವ್ ರಸ್ತೆಯಲ್ಲಿರುವ ಕರುಣಾ ರೆಸಿಡೆನ್ಸಿಯ ಲಾಡ್ಜ್ ಕೊಠಡಿಯಲ್ಲಿ ದೇವೇಂದ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬವು ಮೂರು ದಿನಗಳ ಹಿಂದೆ ಹೋಟೆಲ್ ರೂಂ ಕಾಯ್ದಿರಿಸಿತ್ತು, ಆರಂಭದಲ್ಲಿ ಅವರು ಒಂದು ದಿನ ಉಳಿಯಲು ಯೋಜಿಸಿದ್ದರು, ಕ್ರಮೇಣ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದರು.

ದೇವೇಂದ್ರ ಮೊದಲು ತನ್ನ ಮಕ್ಕಳು ಮತ್ತು ಹೆಂಡತಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ನಾವು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

ಆತ್ಮಹತ್ಯೆ ಪತ್ರದಲ್ಲಿ ದೇವೇಂದ್ರ ಅವರು ಆರ್ಥಿಕ ಸಮಸ್ಯೆಗಳಿದ್ದು, ಸಾಲ ಮಾಡಿರುವುದಾಗಿ ತಿಳಿಸಿದ್ದಾರೆ. ನಗರ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com