ಹುಬ್ಬಳ್ಳಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ವಿಷಕನ್ಯ ಎಂದು ಕರೆದಿರುವ ಕುರಿತು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸೋಮವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರಿಗೆ ಕಾಂಗ್ರೆಸ್ ನಾಯಕರು ವಿಷಸರ್ಪ ಎಂದು ನಿಂದಿಸಿದ್ದರು. ಹೀಗಾಗಿಯೇ ಸೋನಿಯಾ ಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿದ್ದೆ. ಇನ್ನು ದೊರೆಸ್ವಾಮಿ ನಾಯಕ ಕಂಪನಿಗೆ ಕಾಂಗ್ರೆಸ್ ಎಜೆಂಟ್ ಎಂದು ಹೇಳಿದ್ದೆ. ಈ ಹೇಳಿಕೆ ಕುರಿತು ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆಯೇ ವಿನಃ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನ ಕುರಿತು ಪ್ರತಿಕ್ರಿಯಿಸಿ ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎಂದು ಹೇಳಿದರು. ಈ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದರು.
Advertisement