ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಂಬಿಲ ಎಂಬಲ್ಲಿ ಶುಕ್ರವಾರ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಬಂಟ್ವಾಳ ತಾಲೂಕಿನ ಅಮ್ಟಾಡಿಯ ಸಂದೀಪ್ ಲೋಬೋ (35) ಎಂದು ಗುರುತಿಸಲಾಗಿದೆ. ಆತನ ನೆರೆಮನೆಯ ಆಕಾಶ್ಗೆ ಗಂಭೀರ ಗಾಯಗಳಾಗಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂದೀಪ್ ಮತ್ತು ಆಕಾಶ್ ವೆಲ್ಡರ್ಗಳಾಗಿ ಕೆಲಸ ಮಾಡುತ್ತಿದ್ದರು. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ.
ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement