ರಾಯಚೂರು: ಕೆಸರಿನಲ್ಲಿ ಸಿಲುಕಿದ ಮೋದಿ ಬೆಂಗಾವಲು ಹೆಲಿಕಾಪ್ಟರ್!

ಭಾರೀ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ನೊಂದಿಗೆ ತೆರಳುತ್ತಿದ್ದ ಬೆಂಗಾವಲು ಹೆಲಿಕಾಪ್ಟರ್ ಕೆಲಕಾಲ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆಯಿತು.
ಕೆಸರಿನಲ್ಲಿ ಸಿಲುಕಿದ ಬೆಂಗಾವಲು ಹೆಲಿಕಾಪ್ಟರ್
ಕೆಸರಿನಲ್ಲಿ ಸಿಲುಕಿದ ಬೆಂಗಾವಲು ಹೆಲಿಕಾಪ್ಟರ್
Updated on

ರಾಯಚೂರು: ಭಾರೀ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ನೊಂದಿಗೆ ತೆರಳುತ್ತಿದ್ದ ಬೆಂಗಾವಲು ಹೆಲಿಕಾಪ್ಟರ್ ಕೆಲಕಾಲ ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆಯಿತು. ಸಾಕಷ್ಟು ಪ್ರಯತ್ನದ ನಂತರ, ಹೆಲಿಕಾಪ್ಟರ್ ಅನ್ನು ಮಣ್ಣಿನಿಂದ ಹೊರತೆಗೆಯಲಾಯಿತು. ಇದರ ವಿಡಿಯೋಗಳು ಕೂಡಾ ವೈರಲ್ ಆಗಿವೆ. 

ಒಮ್ಮೆ ಸಿಂಧನೂರಿನಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ತಮ್ಮ ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದಾಗ ಅದರೊಂದಿಗೆ ಬರುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಮಾಡಲು ಪ್ರಾರಂಭಿಸಿದಾಗ ಕೆಸರಿನಲ್ಲಿ ಸಿಲುಕಿತು.

ಇದಕ್ಕೂ ಮುನ್ನ ಕಾಕ್‌ಪಿಟ್‌ನ ಗಾಜಿಗೆ ಗಾಳಿಪಟ ತಗುಲಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕರ್ನಾಟಕ ಘಟಕದ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೆಲಿಕಾಪ್ಟರ್ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com