ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶುಕ್ರವಾರ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.

ಈ ಕುರಿತು ಪಾಲಿಕೆ ನೋಟಿಸ್ ಹೊರಡಿಸಿದ್ದು, ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಗೌತಮ ಬುದ್ಧ ಜನ್ಮ ದಿನದ ಅಂಗವಾಗಿ ಬುದ್ದ ಪೂರ್ಣಿಮೆ ಆಚರಿಸಲಾಗುತ್ತದೆ. ಪಾಲಿಕೆ ಅಂದಾಜಿನ ಪ್ರಕಾರ ನಗರದಲ್ಲಿ 3,000 ಪರಾವನಗಿ ಹೊಂದಿದ ಅಂಗಡಿಗಳಿದ್ದು, ಮೂರು ಅಧಿಕೃತ ಕಾಸಾಯಿಖಾನೆಗಳಿವೆ. ಮಾರ್ಚ್ ತಿಂಗಳಲ್ಲಿ ನಡೆದ ರಾಮನವಮಿ ದಿನದಂದು ಕೂಡಾ ಇದೇ ರೀತಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com