ಚನ್ನಗಿರಿ: SSLC ಯಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾಗದ್ದ ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಮುದಿಗೆರೆ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕರನ್ನು ಮುದಿಗೆರೆಯ 16 ವರ್ಷದ ಗಣೇಶ್ ಮತ್ತು ಅಜ್ಜಿಹಳ್ಳಿ ಗ್ರಾಮದ ಹೇಮಂತ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತದೇಹಗಳನ್ನು ಮೇಲೆತ್ತಲಾಗಿದೆ. ಇನ್ನು ಬಾಲಕರನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Advertisement