ಚಿತ್ರದುರ್ಗ: ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ; 58 ಲಕ್ಷ ರೂ. ಜಪ್ತಿ

ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.
ರಘು ಆಚಾರ್
ರಘು ಆಚಾರ್

ಚಿತ್ರದುರ್ಗ: ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನಡೆಸಿರುವ ಚುನಾವಣಾಧಿಕಾರಿಗಳು 58.83 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದ್ದಾರೆ.

ಮತದಾರರಿಗೆ ಹಂಚಲು ಇಟ್ಟಿದ್ದ ಕವರ್‌ಗಳಲ್ಲಿ ನಗದು ಪತ್ತೆಯಾಗಿದೆ. ಕವರ್‌ಗಳಲ್ಲಿ ಸುಮಾರು 50 ಲಕ್ಷ ರೂಪಾಯಿ ನಗದು ಮತ್ತು ಮನೆಯ ಇತರ ಸ್ಥಳಗಳಲ್ಲಿ ಸುಮಾರು 8.83 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ದಾಳಿ ನಡೆಸಿದ್ದ ಅಧಿಕಾರಿಗಳು ಇಂದೂ‌ ಕೂಡಾ ತಪಾಸಣೆ ಮುಂದುವರೆಸಿದ್ದಾರೆ.ವಿಚಕ್ಷಣಾ‌ ದಳದ ಅಧಿಕಾರಿ ರಾಘವೇಂದ್ರ, ಅಬಕಾರಿ‌ ಅಧಿಕಾರಿ ಇಮ್ರಾನ್, ನೋಡೆಲ್ ಅಧಿಕಾರಿ ಮಧುಸೂದನ್ ನೇತೃತ್ವ ದಲ್ಲಿ ದಾಳಿ ನಡೆದಿದೆ.

ಅಲ್ಲದೆ, 239 ಲೀಟರ್ ಬಿಯರ್ ಮತ್ತು 9 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಬುಧವಾರವೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದು ಘಟನೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಾದಿಕ್‌ನಗರದಲ್ಲಿ 1.08 ಲಕ್ಷ ರೂ. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲೂ ಪೊಲೀಸರು 4.25 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.‌ ಇದರೊಟ್ಟಿಗೆ ಅಂಚೆ ಮತದಾರರ ಪಟ್ಟಿಯೂ ಲಭ್ಯವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com