ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಾಗಿದ್ದು, ಶಸ್ತ್ರಕ್ರಿಯೆ ಕೂಡಾ ನಡೆದಿತ್ತು. ಇದೀಗ ಬುಧವಾರ ರಾತ್ರಿ ಆರೋಗ್ಯದಲ್ಲಿ ದಿಢೀರ್ ವ್ಯತ್ಯಾಸವಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.
Advertisement