ಚಿಕ್ಕಮಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಿ.ಟಿ ರವಿ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿ,ಟಿ ರವಿ ಅವರಿಗೆ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿ,ಟಿ ರವಿ
ಸಿ,ಟಿ ರವಿ
Updated on

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರಿಗೆ ಇತ್ತೀಚೆಗೆ ಕಿಡ್ನಿ ಸಮಸ್ಯೆ ಎದುರಾಗಿದ್ದು, ಶಸ್ತ್ರಕ್ರಿಯೆ ಕೂಡಾ ನಡೆದಿತ್ತು. ಇದೀಗ ಬುಧವಾರ ರಾತ್ರಿ ಆರೋಗ್ಯದಲ್ಲಿ ದಿಢೀರ್‌ ವ್ಯತ್ಯಾಸವಾಗಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವಿಧಾನಸಭಾ ಚುನಾವಣೆಯಲ್ಲಿ  ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ನಿನ್ನೆ ಕುಟುಂಬ ಸಮೇತ ಚಿಕ್ಕಮಗಳೂರಿನಲ್ಲಿ ಮತದಾನ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com