ಶಿಗ್ಗಾಂವಿ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಹಾವು: ಸಿಎಂ ಎಂಟ್ರಿ ಕೊಡುತ್ತಿದ್ದಂತೆ ಬುಸುಗುಟ್ಟ ನಾಗಪ್ಪ, ಕೆಲಕಾಲ ಆತಂಕ ಸೃಷ್ಟಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಕಚೇರಿ ಬಳಿ ಹಾವು ಕಾಣಿಸಿಕೊಂಡಿರುವುದು.
ಕಚೇರಿ ಬಳಿ ಹಾವು ಕಾಣಿಸಿಕೊಂಡಿರುವುದು.
Updated on

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಬಿಜೆಪಿ ಕಚೇರಿಯಲ್ಲಿ ನಾಗರಹಾವೊಂದು ಕಾಣಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೊಮ್ಮಾಯಿಯವರು ಬಿಜೆಪಿಗೆ ಕಚೇರಿಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿಯೇ ಹಾವು ಕಾಣಿಸಿಕೊಂಡಿದೆ. ಈ ವೇಳೆ ಅಲರ್ಟ್ ಆದ ಸಿಬ್ಬಂದಿಗಳು ಮುಖ್ಯಮಂತ್ರಿಗಳು ಮುಂದೆ ಹೋಗದಂತೆ ತಡೆದಿದ್ದಾರೆ. ಬಳಿಕ ಹಾವನ್ನು ರಕ್ಷಣೆ ಮಾಡಿ, ಕಚೇರಿಯಿಂದ ದೂರ ಬಿಟ್ಟಿದ್ದಾರೆ.

ಈ ಬಾರಿಯೂ ಬಿಜೆಪಿ ಸರ್ಕಾರ ರಚಿಸುವ ಇಂಗಿತ ವ್ಯಕ್ತಪಡಿಸಿದ್ದ ಬೊಮ್ಮಾಯಿ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಬಹುತೇಕ ಖಚಿತಗೊಂಡಿದೆ ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನಗಳನ್ನು ಗಳಿಸುವತ್ತ ಹೆಜ್ಜೆ ಇರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com