ನಗರದಲ್ಲಿ ಹುಕ್ಕಾ ಬಾರ್​​, ಕ್ಯಾಸಿನೋ ಕ್ಲಬ್​​​ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ

ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್​ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.
ಶಾಸಕ ಹರೀಶ್ ಗೌಡ
ಶಾಸಕ ಹರೀಶ್ ಗೌಡ
Updated on

ಮೈಸೂರು: ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್​ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರಿಗೆ ಹಾಗೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಿದರು. ಮೈಸೂರು ನಗರದಲ್ಲಿ ಹುಕ್ಕಾ ಬಾರ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಗರದ ಕೆಲವು ಭಾಗಗಳಲ್ಲಿ ಹುಕ್ಕಾ ಬಾರ್ ಇದೆ. ಆದರೆ, ಇದರ ಜೊತೆಗೆ ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ನಡೆಯುತ್ತಿದ್ದು. ರಾಜ್ಯದಲ್ಲಿ ಬಿಜೆಪಿಯವರು ಕ್ಯಾಸಿನೊ ಪರಂಪರೆ ಬೆಳೆಸಿದ್ದಾರೆಂದು ಆರೋಪಿಸಿದರು.

ಮಾಜಿ ಮಂತ್ರಿ ಅಶ್ವಥ್ ನಾರಾಯಣ್ ಅವರು ಒಮ್ಮೆ ಕರೆ ಮಾಡಿ ನನ್ನ ಕುಟುಂಬದ ಸದಸ್ಯರು ಇಲ್ಲಿ ಕ್ಯಾಸಿನೊ ನಡೆಸುತ್ತಿದ್ದಾರೆ, ಅವರಿಗೆ ತೊಂದರೆ ಕೊಡಬೇಡ ಎಂದು ಹೇಳಿದ್ದರು, ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಜೂಜು ಅಡ್ಡೆ ಹೆಚ್ಚಾಗಿದ್ದು, ಖಂಡಿತವಾಗಿಯೂ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತೇನೆಂದು ಹೇಳಿದರು.

ನನ್ನ ಕ್ಷೇತ್ರ ಕಾಂಗ್ರೆಸ್​ ಪಕ್ಷದ ಭದ್ರಕೋಟೆ, ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾತ್ರ ಗೆಲ್ಲುತ್ತದೆ. ಆದರೆ, ಕಳೆದ ಬಾರಿ ಗೊಂದಲದಿಂದ ಬಿಜೆಪಿ ಗೆದ್ದಿತ್ತು ಎಂದು ತಿಳಿಸಿದರು.

ಬಳಿಕ ಪಬ್ ಹಾಗೂ ಹುಕ್ಕಾ ಬಾರ್​​ಗಳಿಂದ ಹಣ ಪಡೆದಿದ್ದಾರೆಂಬ ಮಾಜಿ ಶಾಸಕ ನಾಗೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ ಹರೀಶ್ ಗೌಡ ಅವರು, ನಾನು ಹುಕ್ಕಾ ಬಾರ್​​ಗಳಿಂದ ಹಣ ಪಡೆದಿದ್ದೇನೆ ಎಂಬುದು ಸುಳ್ಳು, ನಾನು ಚುನಾವಣೆಗಾಗಿ ಯಾರಿಂದಲೂ ಹಣ ಪಡೆದಿಲ್ಲ. ನನಗೆ ಪಕ್ಷ ನೀಡಿದ ಹಣದಿಂದಲೇ ಚುನಾವಣೆ ಮಾಡಿದ್ದೇನೆಂದು ಸ್ಪಷ್ಟಪಡಿಸಿದರು.

ಯಾವ ಪಬ್, ಬಾರ್, ಹುಕ್ಕಾ ಬಾರ್​​ಗಳಿಂದ ಹಣ ಪಡೆದಿಲ್ಲ. ಇವುಗಳನ್ನು ನೂರಕ್ಕೆ ನೂರರಷ್ಟು ಮುಚ್ಚಿಸುತ್ತೇನೆ. ನನಗೆ ಮೂರು ಪಕ್ಷದ ಕಾರ್ಯಕರ್ತರು ಸಹಾಯ ಮಾಡಿ, ಬೆಂಬಲಕ್ಕೆ ನಿಂತು ಗೆಲ್ಲಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು.

ಮೈಸೂರಿಗೆ ಕ್ಯಾಸಿನೊ ತಂದಿದ್ದರಿಂದ ನಮ್ಮ ಮಕ್ಕಳು ಹಾಳಾಗುತ್ತಾರೆಂದು ಆ ವೇಳೆಯಲ್ಲಿ ನಗರ ಪೋಲಿಸ್ ಆಯುಕ್ತರ ಗಮನಕ್ಕೆ ನಾನೇ ತಂದಿದ್ದೆ. ಆ ಸಮಯದಲ್ಲಿ ಪೋಲಿಸ್ ಆಯುಕ್ತರು ಕ್ಯಾಸಿನೊ ಬಂದ್ ಮಾಡುವಂತೆ ಕೆಲಸ ಮಾಡಿದ್ದರು. ಇದು ಹಿಂದಿನ ಬಿಜೆಪಿ ಶಾಸಕರಿಗೆ ಗೊತ್ತಿಲ್ಲವೇ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com