ಶಶಿಕಿರಣ್ ಶೆಟ್ಟಿ
ರಾಜ್ಯ
ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ
ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಹಾಗೂ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಎಜಿ ಆಯ್ಕೆ ಅಧಿಕಾರವನ್ನು ಸಿಎಂಗೆ ನೀಡಲಾಗಿದೆ. ಅದರಂತೆ ಹೈಕೋರ್ಟ್ ನ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ಅವರು ಇತ್ತೀಚಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿದ್ದ ಎಜಿ ಸ್ಥಾನಕ್ಕೆ ಇದೀಗ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ