ಮೈಸೂರು: ಶುಕ್ರವಾರ ಕುವೆಂಪುನಗರದ ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹಿಂದಿರುಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಂದ 1.34 ಲಕ್ಷ ರೂ. ನಗದಿದ್ದ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.
ಕೆಎಚ್ಬಿ ಮೊದಲ ಹಂತದ ಕುವೆಂಪುನಗರ ನಿವಾಸಿ ಮದನ್ (63) ಅವರು ನೃಪತುಂಗ ರಸ್ತೆಯಲ್ಲಿರುವ ಎಸ್ಬಿಐ ಶಾಖೆಯಿಂದ ಹಣ ಡ್ರಾ ಮಾಡಿಕೊಂಡು ಮನೆ ಕಡೆಗೆ ಫುಟ್ಪಾತ್ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಣವಿದ್ದ ಬ್ಯಾಗನ್ನು ಹಿಂದಿನಿಂದ ದೋಚಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ (ಅಪರಾಧ ಮತ್ತು ಸಂಚಾರ) ಎಸ್.ಜಾಹ್ನವಿ ಭೇಟಿ ನೀಡಿ, ವಾಣಿಜ್ಯ ಮಳಿಗೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಕುವೆಂಪುನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement
Advertisement