ಚಿಕ್ಕಮಗಳೂರು: ಕಾಲುವೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ನೀರಿನಲ್ಲಿ ಆಟ ಆಡುವಾಗ ಆಯಾ ತಪ್ಪಿ ಈ ಘಟನೆ ಸಂಭವಿಸಿದೆ. ಒಬ್ಬರ ರಕ್ಷಣೆಗೆ ಮತ್ತೊಬ್ಬರು ಹೋಗಿ ಮೂವರು ಸಾವನ್ನಪ್ಪಿದ್ದಾರೆ.
ಕಾಲುವೆಯ ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಮೂವರು ಮುಳುಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಘಟನೆ ನಡೆದಿದೆ. ರವಿ (31), ಅನನ್ಯ (17), ಶಾಮವೇಣಿ (16) ಮೃತ ದುರ್ದೈವಿಗಳು. ಈ ಮೂವರು ನೀರಿನಲ್ಲಿ ಆಟವಾಡುವಾಗ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.
ರವಿ ಮೂಲತಃ ಲಕ್ಕವಳ್ಳಿ ನಿವಾಸಿ, ಅನನ್ಯ, ಶಾಮವೇಣಿ ರವಿಯ ಸಹೋದರಿಯರ ಮಕ್ಕಳು. ಅನನ್ಯ ಮೂಲತಃ ಶಿವಮೊಗ್ಗ, ಶಾಮವೇಣಿ ನಂಜನಗೂಡಿನವರು. ಸಂಬಂಧಿ ಮನೆ ಲಕ್ಕವಳ್ಳಿಗೆ ಬಂದಾಗ ಈ ಘಟನೆ ನಡೆದಿದೆ. ರವಿ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement