ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾಲು ಮರದ ತಿಮ್ಮಕ್ಕ
ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಾಲು ಮರದ ತಿಮ್ಮಕ್ಕ

ಸಿಎಂ ಸಿದ್ದು ಭೇಟಿಯಾಗಿ ಶುಭ ಹಾರೈಸಿದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ!

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
Published on

ಬೆಂಗಳೂರು: ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ನಾಡಿನಲ್ಲಿ ಮಳೆ, ಬೆಳೆ ಸಮೃದ್ಧವಾಗಲಿ. ಉತ್ತಮ ಆಡಳಿತ ನಡೆಸುವಂತಾಗಲಿ ಎಂದು ತಿಮ್ಮಕ್ಕ ಅವರು ಶುಭ ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ.

ನಿಮ್ಮ ಆರೋಗ್ಯ ಚೆನ್ನಾಗಿ ನೋಡಿಕೊಳ್ಳಿ, ಸರ್ಕಾರ ನಿಮ್ಮ ಬಗ್ಗೆ ಕಾಳಜಿ ವಹಿಸುತ್ತದೆ ಎಂದು ಸಿದ್ದರಾಮಯ್ಯ ಅವರು ತಿಮ್ಮಕ್ಕ ಅವರಿಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com