ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಯಾದಗಿರಿ: ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.

ಯಲ್ಲಕಿ ಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಯಲ್ಲಕಿ ಗೌಡ ಪಿರಿಯಾಪಟ್ಟಣದ ಬ್ಯಾಂಕ್‌ನಲ್ಲಿ ರೂ.15 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ರೂ.6 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.

ಪಡೆದ ಸಾಲದಿಂದ ಯಲ್ಲಿಕಿ ಗೌಡ ತಮ್ಮ ಮೂರು ಎಕರೆ ಜಮೀನಿನಲ್ಲಿ ತಂಬಾಕು, ಶುಂಠಿ ಬೆಳೆದಿದ್ದರು. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಬೆಳೆ ನಷ್ಟ ಎದುರಾಗಿದ್ದು, ಸಾಲದ ಹೊರೆ ತಾಳಲಾರದೆ, ನಿನ್ನೆ ತಮ್ಮ ಮನೆಯಲ್ಲೇ ನೇಣಿ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com