ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 

ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪೊಲೀಸರು ಆರೋಪಿ ಬೆಂಗಳೂರಿನ ಬೇಗೂರು ರಸ್ತೆಯಲ್ಲಿ ನೆಲೆಸಿದ್ದ ಮೊಹಮ್ಮದ್ ಹುಸೇನ್ ಮನೆಗೆ ತೆರಳಿದ್ದರು. ಆದರೆ ಈ ವೇಳೆ ಮೊಹಮ್ಮದ್ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದನು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

ಪೊಲೀಸರೇ ತನ್ನ ಮಗನನ್ನು ಕಟ್ಟಡದಿಂದ ತಳ್ಳಿ ಹತ್ಯೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪದಡಿ ಮೊಹಮ್ಮದ್ ಹುಸೇನ್ ವಿರುದ್ಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ಸಿಬ್ಬಂದಿ ತೆರಳಿದ್ದಾಗ ಘಟನೆ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com