ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ: ಎಫ್‌ಐಆರ್ ದಾಖಲು

ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

ನಕಲಿ ದಾಖಲೆಗಳನ್ನು ನೀಡಿ ಯೋಜನೆಯಡಿ ಟೆಂಡರ್ ನೀಡಲಾಗಿದೆ ಎಂದು ಪಾಲಿಕೆ ಎಂಡಿ ಪಿ.ನಾಗೇಶ್ ದೂರಿನಲ್ಲಿ ಆರೋಪಿಸಿದ್ದಾರೆ.

2019-20 ಮತ್ತು 2020-21ನೇ ಸಾಲಿನಲ್ಲಿ ಟೆಂಡರ್ ಹಂಚಿಕೆ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದ್ದು, ಯೋಜನೆಗೆ ಮೀಸಲಿಟ್ಟ ಹಣದಲ್ಲಿಯೂ ಅಕ್ರಮಗಳು ನಡೆದಿದೆ. ಇದರಲ್ಲಿ ಪಾಲಿಕೆಯ ಅಂದಿನ ಎಂಡಿ ಕೆ.ಎಂ.ಸುರೇಶ್, ಅಂದಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ ಎಂ.ಹರಗಾಪುರೆ ಮತ್ತಿತರರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com