ಬಾಕ್ಸ್ ನಲ್ಲಿ ಉಪ್ಪು: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಬಾಂಬ್ ಭೀತಿ ಆತಂಕ ದೂರ!

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್‌ಗಳು ಪತ್ತೆಯಾಗಿದ್ದರಿಂದ ಬಾಂಬ್ ಭೀತಿ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಪರಿಶೀಲನೆ ಬಳಿಕ ಅದು ಬಾಂಬ್ ಪುಡಿಯಲ್ಲ ಉಪ್ಪು ಎಂದು ತಿಳಿದುಬಂದಿದೆ.
ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್‌ಗಳು
ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್‌ಗಳು
Updated on

ಶಿವಮೊಗ್ಗ: ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್‌ಗಳು ಪತ್ತೆಯಾಗಿದ್ದರಿಂದ ಬಾಂಬ್ ಭೀತಿ ನಿರ್ಮಾಣವಾಗಿತ್ತು. ಆದರೆ ಪೊಲೀಸರ ಪರಿಶೀಲನೆ ಬಳಿಕ ಅದು ಬಾಂಬ್ ಪುಡಿಯಲ್ಲ ಉಪ್ಪು ಎಂದು ತಿಳಿದುಬಂದಿದೆ.

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ಎರಡು ಅನುಮಾನಾಸ್ಪದ ಬಾಕ್ಸ್‌ಗಳು ಪತ್ತೆಯಾಗಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರ ಪರಿಶೀಲನೆ ಬಳಿಕ ಈ ಭೀತಿ ಇದೀಗ ತಿಳಿಗೊಂಡಿದೆ. ಅನುಮಾನಾಸ್ಪದ ಬಾಕ್ಸ್ ಗಳು ಪತ್ತೆಯಾದ ಹಿನ್ನಲೆಯಲ್ಲಿ ಸ್ಥಳದಲ್ಲಿ ವಿಸ್ತೃತ ಶೋಧ ಕಾರ್ಯಾಚರಣೆಯನ್ನು ತಡರಾತ್ರಿಯವರೆಗೆ ನಡೆಸಲಾಯಿತು. ಬಳಿಕ ಇದು ಬಾಂಬ್ ಅಲ್ಲ.. ಬದಲಿಗೆ ಉಪ್ಪಿನ ಪುಡಿ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ ಬಳಿಕ ಅಲ್ಲಿ ನೆರೆದಿದ್ದವರು ನಿರಾಳರಾದರು.

ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಮಿಥುನ್ ಕುಮಾರ್ ಜಿ ಕೆ ಅವರು, ಬೆಂಗಳೂರಿನ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ತಜ್ಞರ ತಂಡ ಬಾಕ್ಸ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಅವರ ಸೂಕ್ಷ್ಮ ಪರೀಕ್ಷೆಯ ನಂತರ, ಅವರು ಯಾವುದೇ ಸ್ಫೋಟಕ ವಸ್ತು ಇಲ್ಲ ಎಂದು ಪ್ರಮಾಣೀಕರಿಸಿದ್ದಾರೆ. ತರುವಾಯ, ಪೆಟ್ಟಿಗೆಗಳನ್ನು ತೆರೆಯಲಾಯಿತು, ಅವುಗಳು ನಿರುಪದ್ರವ ತ್ಯಾಜ್ಯವಸ್ತುಗಳಾಗಿದ್ದವು. ಇದನ್ನು ಪ್ರಾಥಮಿಕವಾಗಿ ಉಪ್ಪು ಎಂದು ಗುರುತಿಸಲಾಗಿದೆ ಎಂದು ಹೇಳಿದರು.

ಬಾಕ್ಸ್‌ಗಳಲ್ಲಿರುವ ವಸ್ತುಗಳು ಯಾವುದೇ ಅಪಾಯವನ್ನುಂಟುಮಾಡುವುದಿಲ್ಲ ಎಂದು ನಿರ್ಧರಿಸಿದ್ದರಿಂದ ಪ್ರದೇಶದಲ್ಲಿ ಆವರಿಸಿದ್ದ ಆತಂಕ ದೂರವಾಯಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com