ಪುತ್ತೂರು: ಹುಲಿವೇಷ ಕಲಾವಿದರ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ

ಪುತ್ತೂರಿನಲ್ಲಿ ಹುಲಿವೇಷ ತಂಡದ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 
ಹತ್ಯೆಯಾದ ವ್ಯಕ್ತಿ ಅಕ್ಷಯ್ ಕಲ್ಲೇಗ
ಹತ್ಯೆಯಾದ ವ್ಯಕ್ತಿ ಅಕ್ಷಯ್ ಕಲ್ಲೇಗ

ಪುತ್ತೂರು: ಪುತ್ತೂರಿನಲ್ಲಿ ಹುಲಿವೇಷ ತಂಡದ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಕ್ಷಯ್ ಕಲ್ಲೇಗ ಹತ್ಯೆಯಾದ ಯುವಕನಾಗಿದ್ದು, ಸೋಮವಾರ ಮಧ್ಯರಾತ್ರಿ ನೆಹರೂ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. 

ಅಕ್ಷಯ್ ಕಲ್ಲೇಗ ಪ್ರಸಿದ್ಧ ನವರಾತ್ರಿ ತಂಡವಾದ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥರಾಗಿದ್ದರು.  

ಕಲ್ಲೇಗ ಕಳೆದ 6 ವರ್ಷಗಳಿಂದ ಮುಂಚೂಣಿಯಲ್ಲಿದ್ದ ಹುಲಿ ವೇಷ ತಂಡವಾಗಿದ್ದು, ಈ ತಂಡ ಹಲವು ಸ್ಪರ್ಧೆಗಳಲ್ಲಿ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ಪಡೆದಿದೆ.

ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಲ್ಲೇಗ ಹಾಗೂ ಗುಂಪೊಂದರ ಸದಸ್ಯರ ನಡುವೆ ವಾಗ್ವಾದ ನಡೆದಿತ್ತು.  ಈ ಘಟನೆಯಲ್ಲಿ ಉಂಟಾದ ನಷ್ಟದ ಬಗ್ಗೆ ಮಾತನಾಡಲು ನೆಹರು ನಗರಕ್ಕೆ ಆಗಮಿಸಲು ಗುಂಪಿನ ಸದಸ್ಯರು ಸೂಚಿಸಿದ್ದರು. ಮಾತನಾಡಲು ಆಗಮಿಸಿದ್ದಾಗ ಈತನನ್ನು ಹಿಂಬಾಲಿಸಿ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ನಂತರ ಯುವಕನ ಶವ ರಸ್ತೆ ಬದಿಯ ಪೊದೆಗಳ ಬಳಿ ಪತ್ತೆಯಾಗಿದೆ.

ಈ ಪ್ರದೇಶದ ರಸ್ತೆಯುದ್ದಕ್ಕೂ ರಕ್ತದ ಕಲೆಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಮನೀಶ್ ಮತ್ತು ಚೇತು ಪೊಲೀಸರ ಮುಂದೆ ಶರಣಾಗಿದ್ದು, ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಅಪರಾಧದಲ್ಲಿ ನೇರವಾಗಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 504, 506, 307, 302 ಕಲಂ 34 ರ ಅಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com